ಮುನ್ನುಡಿ
ಗೆದ್ದೇ ಬಿಡೋಣ... ಸೋತು ಸುಮ್ಮನಿರಲು ನಾವು ಈ ಜಗತ್ತಿನಲ್ಲಿ ಹುಟ್ಟಿಲ್ಲ! ನೆನಪಿರಲಿ, ಗೆಲುವುಗಳು ರಾತ್ರೋರಾತ್ರಿ ನಮ್ಮ ಮನೆ ಬಾಗಿಲು ಬಡಿಯುವುದಿಲ್ಲ. ಗೆಲುವುಗಳು ಅವಿರತ ಪರಿಶ್ರಮ, ಸಮರ್ಪಣೆ ಮತ್ತು ಛಲದ ಪ್ರತಿಫಲಗಳು. ಪ್ರತಿಯೊಬ್ಬರೂ ಗೆಲುವುಗಳನ್ನು ಬೆನ್ನಟ್ಟಲು ಪ್ರಯತ್ನಿಸುತ್ತಾರೆ ಆದರೆ ಗೆಲುವುಗಳು ಮಾತ್ರ ಗೆಲ್ಲುವ ಛಲವಿರುವ ವ್ಯಕ್ತಿಗಳನ್ನು ಬಿಡದೆ ಬೆನ್ನಟ್ಟುತ್ತವೆ.
ಅಂಬಿಕಾ ತಮಿಳುನಾಡಿನ ದಿಂಡಿಗಲ್ ಮೂಲದ ಹದಿನಾಲ್ಕು ವರ್ಷದ ಹುಡುಗಿ. ತನ್ನ ಹದಿನಾಲ್ಕನೆಯ ವರ್ಷಕ್ಕೆ ಪೊಲೀಸ್ ಪೇದೆಯನ್ನು ಮದುವೆಯಾಗಿ, ಹದಿನೆಂಟು ವರ್ಷಕ್ಕೆ ಇಬ್ಬರು ಮಕ್ಕಳ ತಾಯಿಯಾದಳು. ತನ್ನ ಮಕ್ಕಳು ಮತ್ತು ಪ್ರೀತಿಯ ಗಂಡನೊಂದಿಗೆ ಸಂತೋಷದ ಜೀವನವನ್ನು ನಡೆಸುತ್ತಿದ್ದಳು. ಇದುವೇ, ತನ್ನ ಜೀವನದ ಬಹುಮುಖ್ಯ ಗೆಲುವೆಂದು ಭಾವಿಸಿದ್ದಳು. ಆ ಒಂದು ದಿನ ಪೊಲೀಸ್ ಪೆರೇಡ್ ನಡೆಯುತ್ತಿತ್ತು. ಗಂಡ ಎಂದಿನಂತೆ ಊಟಕ್ಕೆ ಮನೆಗೆ ಬರಲಿಲ್ಲ. ಆತಂಕಗೊಂಡ ಅಂಬಿಕಾ ತನ್ನ ಮಕ್ಕಳೊಂದಿಗೆ ಆ ಪೆರೇಡ್ ನಡೆಯುತ್ತಿದ್ದ ಸ್ಥಳಕ್ಕೆ ಬಂದಳು. ಪೆರೇಡ್ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಗಾಂಭೀರ್ಯದಿಂದ ನಿಂತಿದ್ದರು. ನೂರಾರು ಪೊಲೀಸರು ಸಾಲಿನಲ್ಲಿ ಅವರಿಗೆ ಶಿಸ್ತಿನಿಂದ ಸೆಲ್ಯೂಟ್ ಹೊಡೆದು ಗೌರವ ತೋರಿಸುತ್ತಾ ಮುಂದಕ್ಕೆ ಸಾಗುತಿದ್ದರು. ಗಂಡ ಕೂಡ ಅದೇ ಸಾಲಿನಲ್ಲಿ ನಿಂತು ಆ ವ್ಯಕ್ತಿಗೆ ಸೆಲ್ಯೂಟ್ ಮಾಡಿದ್ದನ್ನು ಅಂಬಿಕಾ ದೂರದಿಂದಲೇ ಗಮನಿಸಿದಳು. ಇದೆಲ್ಲಾವನ್ನು ನೋಡಿದ ಅಂಬಿಕಾಳಿಗೆ “ಆ ಸೆಲ್ಯೂಟ್ ಸ್ವೀಕರಿಸುತ್ತಿರುವ ವ್ಯಕ್ತಿ ಯಾರಿರಬಹುದು?” ಎಂಬ ಪ್ರಶ್ನೆ ಮೂಡಿತು. ಗಂಡ ಮನೆಗೆ ಬಂದ ತಕ್ಷಣ ಆಕೆ ಈ ಪ್ರಶ್ನೆಯನ್ನು ಅವನಲ್ಲಿ ಕೂತಹಲದಿಂದ ಕೇಳಿದಳು. ಅದಕ್ಕೆ ಗಂಡ, “ಅವರು ನಮ್ಮ ರಾಜ್ಯದ ಪೋಲಿಸ್ ಮುಖ್ಯಸ್ಥರು, ಐಪಿಎಸ್ ಅಧಿಕಾರಿ” ಎಂದು ತಿಳಿಸಿದರು. ಇದನ್ನು ತಿಳಿದ ಆಕೆಗೆ ಆ ರಾತ್ರಿ ನಿದ್ದೆ ಬರಲಿಲ್ಲ. ಬೆಳಿಗ್ಗೆ ಎದ್ದು ಆತ್ಮವಿಶ್ವಾಸದಿಂದ ಗಂಡನಿಗೆ “ನಾನು ಐಪಿಎಸ್ ಅಧಿಕಾರಿಯಾಗಲು ಬಯಸುತ್ತೇನೆ” ಎಂದು ತಿಳಿಸಿದಳು. ಎಸ್ಎಸ್ಎಲ್ಸಿ ಓದದ ಪತ್ನಿಯ ಮಾತುಗಳಿಂದ ಆಶ್ಚರ್ಯಗೊಂಡ ಗಂಡ, ಅವಳ ಆಲೋಚನೆಯಲ್ಲಿನ ಸ್ಪಷ್ಟತೆಯನ್ನು ಗಮನಿಸಿ, ಆಕೆಯ ನಿರ್ಧಾರಕ್ಕೆ ಸಹಕರಿಸಿ, ಆ ನಿಟ್ಟಿನಲ್ಲಿ ಪ್ರೋತ್ಸಾಹಿಸುಲು ಮುಂದಾದನು. ತನ್ನ ಗುರಿಯ ಗಮ್ಯಸ್ಥಾನವನ್ನು ನಿರ್ಧರಿಸಿದ ಅಂಬಿಕಾ, ತನ್ನ ಪದವಿ ಮತ್ತು ಪದವಿ ಪೂರ್ವದ ಎಲ್ಲಾ ಕೋರ್ಸ್ಗಳನ್ನು ದೂರ ಶಿಕ್ಷಣದ ಮೂಲಕ ತಮ್ಮ ಮಾತೃಭಾಷೆಯಾದ ತಮಿಳು ಮಾಧ್ಯಮದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಿದಳು. ತದನಂತರ, ಯುಪಿಎಸ್ಸಿ ಪರೀಕ್ಷೆಗೆ ಅಧ್ಯಯನ ಮಾಡಲು ಮಕ್ಕಳನ್ನು ಗಂಡನ ಬಳಿಯೇ ಬಿಟ್ಟು ಚೆನ್ನೈಗೆ ಗೆಲ್ಲುವ ಮನೋಭಾವದೊಂದಿಗೆ ಕನಸು ಹೊತ್ತು ಹೊರಟಳು.
0 Comments
ಆತ್ಮೀಯರೆ…ಓಡುತ್ತಿರುವ ಈ ಕಾಲದಲ್ಲಿ ಕಾಡುತ್ತಿರುವ ಸಮಸ್ಯೆಗಳ ಸಂಖ್ಯೆಯೇ ಹೆಚ್ಚು. ಜವಾಬ್ದಾರಿಗಳ ಮೂಟೆ ಹೊತ್ತು ಕಂಡ ಕನಸ್ಸುಗಳನ್ನು ನನಸಾಗಿಸಲು ಮನುಷ್ಯ ಸೆಣಸುತ್ತಾನೆ. ಜೀವನದಲ್ಲಿ ಉದ್ಭವಿಸಿದ ಭಾಧೆಗಳನ್ನು ಬದಿಗೊತ್ತಿ ಜೀವನ ನಿರ್ವಹಣೆಯ ಉದ್ದೇಶದಿಂದ ಕೈಗೆ ಸಿಕ್ಕ ಉದ್ಯೋಗವನ್ನು ಮಾಡುತ್ತಾ ಜೀವನ ಸಾಗಿಸುವಂತಹ ಜನಸಾಮಾನ್ಯರ ಜೀವನದಲ್ಲಿ ಎಂದೂ ಕಾಣದ ಕೇಳದ ಕೊರೋನಾ ವೈರಸ್ ಎಂಬ ಮಹಾಮಾರಿ ದುತ್ ಎಂದು ಉದ್ಬವಿಸಿ ಕಂಡ ಕನಸುಗಳನ್ನ ದಿಕ್ಕಾಪಾಲಾಗಿಸಿ ಪ್ರತಿಯೊಬ್ಬರ ಜೀವನದಲ್ಲೂ ಒಂದಿಲ್ಲೊಂದು ರೀತಿಯಲ್ಲಿ ಸಮಸ್ಯೆಗಳನ್ನು ಸೃಷ್ಟಿಸಿರುವುದು ಎಲ್ಲರೂ ತಿಳಿದಿರುವ ಸತ್ಯಸಂಗತಿ ಅದು ಅವರವರ ಅನುಭವಕ್ಕೆ ಬಂದಿರುತ್ತದೆ.
|
Site
|
Vertical Divider
|
Our Other Websites
|
Vertical Divider
|
+91-8073067542
080-23213710 Mail-hrniratanka@mhrspl.com |
Receive email updates on the new books & offers
for the subjects of interest to you. |